Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನೊಂದ ಜೀವಿಗಳಿಗೆ ಯೋಗ ಒಂದು ವರದಾನ : ಮಹದೇವಿ.ಎಂ. ಮರಕಟ್ಟಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್.22 : ನೊಂದ ಜೀವಿಗಳಿಗೆ ಯೋಗ ಒಂದು ವರದಾನವಾಗಿದೆ. ಧ್ಯಾನಾಸಕ್ತ ಚಟುವಟಿಕೆಗಳು ಮನಸ್ಸಿಗೆ ಏಕಾಗ್ರತೆ, ನೆಮ್ಮದಿ, ಶಾಂತಿಯನ್ನು ನೀಡುತ್ತದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕಿ ಮಹದೇವಿ.ಎಂ. ಮರಕಟ್ಟಿ ತಿಳಿಸಿದರು.


ಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಹತ್ತು ದಿನಗಳ ಯೋಗ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾಲ್ಕು ಗೋಡೆಗಳ ಬಂಧನದಿಂದ ಬೇಸತ್ತು ಕಾಲನೂಕುತ್ತಿರುವ ಖೈದಿ ಬಂಧುಗಳಿಗೆ ಗುಣಮಟ್ಟದ ಕೌಶಲ್ಯಾಧಾರಿತ ಉತ್ತಮ ಜೀವನಮೌಲ್ಯ ಬಿತ್ತುವ ಸರಳ ಆಸನಗಳ ಅಭ್ಯಾಸಗಳು ಮನಸ್ಸಿನ ಸದೃಢತೆಯನ್ನು ಗಟ್ಟಿಗೊಳಿಸುತ್ತವೆ. ಈ ಸಂದರ್ಭದಲ್ಲಿ ಪಡೆದ ಯೋಗ ತರಬೇತಿಯನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆಯಿತ್ತರು.

ಸಹಾಯಕ ಜೈಲರ್ ರಾಮಣ್ಣ ಹೇರ್‍ಕಲ್, ಶಿಕ್ಷಕ ಶ್ರೀರಾಮರೆಡ್ಡಿ ಹಾಗೂ ಮತ್ತಿತರ ಕಾರಾಗೃಹದ ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ ರಾಜ್ಯಾತ್ಸವ ಪ್ರಶಸ್ತಿ ಪುರಸ್ಕøತ ಹಾಗೂ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ಮುರುಳಿ ನಿರ್ದೇಶನದಲ್ಲಿ ನೂರಕ್ಕೂ ಹೆಚ್ಚು ಖೈದಿ ಬಾಂಧವರು ಯೋಗಾಸನದ ಮಹತ್ವವನ್ನು ಪ್ರಾಯೋಗಿಕವಾಗಿ ಅಭ್ಯಾಸ ಮಾಡಿದರು.

ಫೋಟೋ ಮತ್ತು ವರದಿ ಕೃಪೆ
ಕೆಪಿಎಂ ಗಣೇಶಯ್ಯ, ಚಿತ್ರದುರ್ಗ
ಮೊ: 9448664878

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment