Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೊಂದ ಜೀವಿಗಳಿಗೆ ಯೋಗ ಒಂದು ವರದಾನ : ಮಹದೇವಿ.ಎಂ. ಮರಕಟ್ಟಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್.22 : ನೊಂದ ಜೀವಿಗಳಿಗೆ ಯೋಗ ಒಂದು ವರದಾನವಾಗಿದೆ. ಧ್ಯಾನಾಸಕ್ತ ಚಟುವಟಿಕೆಗಳು ಮನಸ್ಸಿಗೆ ಏಕಾಗ್ರತೆ, ನೆಮ್ಮದಿ, ಶಾಂತಿಯನ್ನು ನೀಡುತ್ತದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕಿ ಮಹದೇವಿ.ಎಂ. ಮರಕಟ್ಟಿ ತಿಳಿಸಿದರು.


ಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಹತ್ತು ದಿನಗಳ ಯೋಗ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾಲ್ಕು ಗೋಡೆಗಳ ಬಂಧನದಿಂದ ಬೇಸತ್ತು ಕಾಲನೂಕುತ್ತಿರುವ ಖೈದಿ ಬಂಧುಗಳಿಗೆ ಗುಣಮಟ್ಟದ ಕೌಶಲ್ಯಾಧಾರಿತ ಉತ್ತಮ ಜೀವನಮೌಲ್ಯ ಬಿತ್ತುವ ಸರಳ ಆಸನಗಳ ಅಭ್ಯಾಸಗಳು ಮನಸ್ಸಿನ ಸದೃಢತೆಯನ್ನು ಗಟ್ಟಿಗೊಳಿಸುತ್ತವೆ. ಈ ಸಂದರ್ಭದಲ್ಲಿ ಪಡೆದ ಯೋಗ ತರಬೇತಿಯನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆಯಿತ್ತರು.

ಸಹಾಯಕ ಜೈಲರ್ ರಾಮಣ್ಣ ಹೇರ್‍ಕಲ್, ಶಿಕ್ಷಕ ಶ್ರೀರಾಮರೆಡ್ಡಿ ಹಾಗೂ ಮತ್ತಿತರ ಕಾರಾಗೃಹದ ಸಿಬ್ಬಂದಿ ಉಪಸ್ಥಿತರಿದ್ದರು. ಜಿಲ್ಲಾ ರಾಜ್ಯಾತ್ಸವ ಪ್ರಶಸ್ತಿ ಪುರಸ್ಕøತ ಹಾಗೂ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ಮುರುಳಿ ನಿರ್ದೇಶನದಲ್ಲಿ ನೂರಕ್ಕೂ ಹೆಚ್ಚು ಖೈದಿ ಬಾಂಧವರು ಯೋಗಾಸನದ ಮಹತ್ವವನ್ನು ಪ್ರಾಯೋಗಿಕವಾಗಿ ಅಭ್ಯಾಸ ಮಾಡಿದರು.

ಫೋಟೋ ಮತ್ತು ವರದಿ ಕೃಪೆ
ಕೆಪಿಎಂ ಗಣೇಶಯ್ಯ, ಚಿತ್ರದುರ್ಗ
ಮೊ: 9448664878

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment