Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯೋಗದಿಂದ ಮನಸ್ಸು ಹಗುರವಾಗುತ್ತದೆ : ಶಾಸಕಿ ಪೂರ್ಣಿಮಾ ಶ್ರೀನಿವಾಸ್

Facebook
Twitter
Telegram
WhatsApp

ಚಳ್ಳಕೆರೆ, (ಅ.19) : ಯೋಗವು ಮನಸ್ಸಿಗೆ ಮತ್ತು ದೇಹಕ್ಕೆ ಬಹಳ ಮುಖ್ಯ, ಯೋಗ ಮಾಡುವುದರಿಂದ ದೇಹಕ್ಕೆ ಯಾವುದೇ ರೋಗ ರುಜಿನಗಳು ಬರುವುದಿಲ್ಲ. ಮನಷ್ಯನಲ್ಲಿರುವ ಕೆಲವು ಒತ್ತಡಗಳು ಯೋಗ ಮಾಡುವುದರಿಂದ ದೂರವಾಗಿ, ಮನಸ್ಸು ಹಗುರವಾಗುತ್ತದೆ ಎಂದು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.

ನಗರದ ಹೊರವಲಯದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರಾಥಮಿಕ ಯೋಗ ಪ್ರಶಿಕ್ಷಣ ಶಿಬಿರದ ಸಮರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಯೋಗ ಎನ್ನುವುದು ಈಗಿನ ಪೀಳಿಗೆಗೆ ಬಹಳ ಮುಖ್ಯವಾಗಿಬೇಕು. ಈಗಿನ ಜನರಲ್ಲಿ ದೇಹಕ್ಕೆ ಶ್ರಮದಾನ ಎನ್ನುವುದು ನೀಡುವುದಿಲ್ಲ. ಹಿಂದಿನ ಕಾಲದಲ್ಲಿ ಕೆಳಗಡೆ ಕುಳಿತು ಊಟ ಮಾಡುತ್ತಿದ್ದರು, ಕಾಳುಗಳನ್ನು ಬೀಸೋ ಕಲ್ಲಿನಲ್ಲಿ ಬೀಸುತ್ತಿದ್ದರು ಅದೇ ಅವರಿಗೆ ಯೋಗ ಮಾಡಿದಂತೆಯಾಗವುದು. ಆದರೆ ಈಗಿನ ಜೀವನ ಶೈಲಿ ಬದಲಾವಣೆಯಾದಂತೆ ಜನರ ಜೀವನವು ಬದಲಾಗಿದೆ. ಈಗ ನೆಲದ ಕುಳಿತುಕೊಳ್ಳುವುದಿಲ್ಲ. ಕುರ್ಚಿಗಳಲ್ಲಿ ಕುಳಿತುಕೊಳ್ಳುತ್ತಾರೆ. ಕಾಳುಗಳನ್ನು ಬೀಸಲ್ಲ ಇದರಿಂದ ಈಗಿನ ಪೀಳಿಗೆಗೆ ಯೋಗ ಅವಶ್ಯವಾಗಿಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೊಸದುರ್ಗ ಕನಕಗುರುಪೀಠದ  ಈಶ್ವರಾನಂದ ಸ್ವಾಮೀಜಿಗಳ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದರು. ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯ ಪ್ರಾಂತ್ಯ ಸಂಚಾಲಕ ಜಿ. ಮಂಜುನಾಥಣ್ಣ,  ವೇದಾವತಿ ವಲಯ ಸಂಚಾಲಕ ಎ.ಕುಮಾರಣ್ಣ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!