Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಪಿ ವಿಧಾನಸಭಾ ಚುನಾವಣೆ : ದಲಿತರ ಮನೆಯಲ್ಲಿ ಊಟ ಮಾಡಿದ ಸಿಎಂ ಯೋಗಿ ಆದಿತ್ಯಾನಾಥ್

Facebook
Twitter
Telegram
WhatsApp

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಘೊಇಷಣೆಯಾಗಿದೆ. ಇತ್ತ ಪಕ್ಷಗಳು ಆ್ಯಕ್ಟೀವ್ ಆಗಿದ್ದು, ಜನರ ಬಳಿಗೆ ತೆರಳಿ ಸಮಸ್ಯೆ ಕೇಳೋದಕ್ಕೆ ಶುರು ಮಾಡಿವೆ. ಇದೀಗ ಯುಪಿ ಸಿಎಂ ಯೋಗಿ ಆದಿತ್ಯಾನಾಥ್ ದಲಿತರ ಮನೆಗೆ ಹೋಗಿ ಊಟ ಮಾಡಿ, ಸುದ್ದಿಯಾಗಿದ್ದಾರೆ.

ಯೋಗಿ ಆದಿತ್ಯಾನಾಥ್ ಅವರು ಗೋರಖ್ ಪುರದಲ್ಲಿ ದಲಿತರ ಮನೆಯಲ್ಲಿ ಊಟ ಮಾಡಿದ್ದಾರೆ. ಈ ಬೆಳವಣಿಗೆ ಸದ್ಯಕ್ಕೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಸೌಹಾರ್ದತೆಯ ಗುರಿಯು ಬೆಳೆಯುತ್ತಲೇ ಇದೆ. ಇಂದು ಗೋರಖ್‌ಪುರದ ಜುಂಗಿಯಾದಲ್ಲಿರುವ ಅಮೃತ್‌ ಲಾಲ್‌ ಭಾರತೀಜಿಯವರ ಮನೆಯಲ್ಲಿ ಕಿಚಡಿ ಮತ್ತು ಪ್ರಸಾದ ಸ್ವೀಕರಿಸುವ ಸೌಭಾಗ್ಯ ನನಗೆ ಸಿಕ್ಕಿತು. ತುಂಬಾ ಧನ್ಯವಾದಗಳು ಭಾರತೀಜಿ ಎಂದು ಸಿಎಂ ಯೋಗಿ ಆದಿತ್ಯಾನಾಥ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇತ್ತೀಚೆಗೆ ಯೋಗಿ ಆದಿತ್ಯಾನಾಥ್ ಸಂಪುಟದಿಂದ ಇಬ್ಬರು ಸಚಿವರು ರಾಜೀನಾಮೆ ನೀಡಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಬೆನ್ನಲ್ಲೇ ಓಬಿಸಿ ಸಮುದಾಯದ ಮತಗಳು ಕೈತಪ್ಪುವ ಭಯ ಬಿಜೆಪಿಯಲ್ಲಿ ಕಾಡುತ್ತಿದೆ. ಈ ಹಿನ್ನೆಲೆ ಸಿಎಂ ಯೋಗಿ ಆದಿತ್ಯಾನಾಥ್ ದಲಿತರ ಮನೆಗಳಿಗೆ ಭೇಟಿ ನೀಡಿ, ಜನರನ್ನ ಸೆಳೆಯಲು ಶುರು ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರ್ತೀವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!