Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿವೃತ್ತ ಯೋಧನನ್ನು ಬೆದರಿಸಿ, ವಿಧವೆಯರನ್ನ ಹೆದರಿಸಿ ಜಮೀನು ಬರೆಸಿಕೊಂಡಿದ್ದೀರಿ : ಡಿಕೆಶಿ ವಿರುದ್ಧ ಸಾಲು ಸಾಲು ಆರೋಪ..!

Facebook
Twitter
Telegram
WhatsApp

ಬೆಂಗಳೂರು: ಮೂಡಾ ಹಗರಣವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ. ಜಮೀನು ಕಬಳಿಸಿದ ಬಗ್ಗೆ ಉಲ್ಲೇಖ ಮಾಡಿದ್ದಾರೆ.

 

ನಿವೃತ್ತ ಯೋಧನ ಪುತ್ರಿಯನ್ನು ಅಪಹರಿಸಿ ಆಸ್ತಿ ಕೊಡದಿದ್ದರೆ ಮಗಳನ್ನು ಕೊಲ್ಲುವುದಾಗಿ ಬೆದರಿಸಿ, ಅಜ್ಜಯ್ಯ ದೇವಸ್ಥಾನದ ಪಕ್ಕದಲ್ಲಿನ ಆಸ್ತಿ ಬರೆಸಿಕೊಂಡಿದ್ದೀರಿ. ಬಿಡದಿಯಲ್ಲಿನ ಐಕಾನ್ ನರ್ಸಿಂಗ್ ಶಾಲೆಯ ಜಾಗವನ್ನು ತೆಗೆದುಕೊಂಡಿದ್ದವರನ್ನು ಹೆದರಿಸಿ ಬರೆಸಿಕೊಂಡಿದ್ದೀರಿ. ಸದಾಶಿವನಗರದಲ್ಲಿ ಮೂವರು ವಿಧವೆಯರನ್ನು ಹೆದರಿಸಿ ಆ ಆಸ್ತಿಯನ್ನು ನಿಮ್ಮ ಮಗಳ ಹೆಸರಿಗೆ ಬರೆಸಿಕೊಂಡಿದ್ದೀರಿ. ಇವುಗಳನ್ನು ತನಿಖೆ ಮಾಡಲು ಒಂದು ಸಿಐಡಿ, ಇಡಿ ಸಾಕಾಗುವುದಿಲ್ಲ. ರಾಮನಗರದಲ್ಲಿ ನೀವೂ ಮತ್ತು ಶಾಸಕ ಸೇರಿಕೊಂಡು ಕೋಡಿಹಳ್ಳಿಯಲ್ಲಿ ಅಕ್ರಮವಾಗಿ ಬಂಡೆ ಒಡೆದು ರಫ್ತು ಮಾಡುತ್ತಿದ್ದೀರಿ.

ನೊಣವಿನಕೆರೆಯ ಅಜ್ಜಯ್ಯ ನಿಮಗೇನಾದರೂ ಸೂಚನೆ ಕೊಟ್ಟಿದ್ದಾರಾ. ಕೊನೆಯ ಹಂತಕ್ಕೆ ಬಂದಿದ್ದೀಯಾ ಅಂತೇನಾದರೂ ಹೇಳಿದ್ದಾರಾ..? ಕನಕಪುರದಲ್ಲಿ ಎಷ್ಟು ಕುಟುಂಬ ಹಾಳು ಮಾಡಿದ್ದೀರಿ ಡಿಕೆ ಶಿವಕುಮಾರ್ ಅವರೇ..? ಅಜ್ಜಯ್ಯನ ಮೇಲೆ ನಿಮಗೆ ನಂಬಿಕೆ ಇದ್ದರೆ ಪ್ರಮಾಣ‌ಮಾಡಿ. ನಾನು ಮಾಡುತ್ತೇನೆ. ಆಗ ಯಾರೂ ಪ್ರಾಮಾಣಿಕರು ಎಂಬುದು ಗೊತ್ತಾಗುತ್ತದೆ. ಇಂದಿನಿಂದ ಡಿಕೆ ಶಿವಕುಮಾರ್ ಅವರಿಗೆ ಅಜ್ಜಯ್ಯನ ಶಾಪ ಪ್ರಾರಂಭವಾಗಿದೆ. ಇನ್ಮುಂದೆ ಅಜ್ಜಯ್ಯ ಕೂಡ ಅವರಿಗೆ ರಕ್ಷಣೆ ಕೊಡುವುದಿಲ್ಲ. ನಾನು ಸಿಎಂ ಆಗಿದ್ದಾಗ ದುಡ್ಡು ಹೊಡೆಯುವ ಕೆಲಸ ಮಾಡಿಲ್ಲ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ನೋಡಿ ಕಾಂಗ್ರೆಸ್ ನವರ ನಿದ್ದೆ ಹಾಳಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!