Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖಂಡಿತವಾಗಿಯೂ ನಾನು ಮದ್ಯಪಾನ ಮಾಡಿರಲಿಲ್ಲ : ಕಂಬಳ ಗಲಾಟೆಗೆ ಸಾನ್ಯಾ ಸ್ಪಷ್ಟನೆ..!

Facebook
Twitter
Telegram
WhatsApp

ಬೆಂಗಳೂರು: ಬಿಗ್ ಬಾಸ್ ಮುಗಿದ ಮೇಲೆ ಶೂಟಿಂಗ್ ಅಂತ ಬ್ಯುಸಿಯಾಗಿರುವ ಸಾನ್ಯಾ ಅಯ್ಯರ್, ಇತ್ತಿಚೆಗೆ ಪುತ್ತೂರಿಗೆ ಭೇಟಿ ನೀಡಿದ್ದರು. ಅದು ಕಂಬಳಕ್ಕೆ ಸಾನ್ಯಾ ಅವರನ್ನು ಅತಿಥಿಯಾಗಿ ಕರೆಯಲಾಗಿತ್ತು. ಅಲ್ಲಿ ಸಾನ್ಯಾ ಅಯ್ಯರ್ ಜೊತೆಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ, ಸಾನ್ಯಾ ಅವನಿಗೆ ಕಪಾಳ ಮೋಕ್ಷ ಮಾಡಿದ್ದಾರೆ ಎಂಬ ಸುದ್ದಿಯೆಲ್ಲಾ ಹರಡಿತ್ತು. ಇದೀಗ ಆ ವಿಚಾರಕ್ಕೆ ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ಸ್ಪಷ್ಟನೆ ನೀಡಿದ್ದಾರೆ.

ನಾನು ಕಂಬಳಕ್ಕೆ ಸ್ನೇಹಿತೆಯರ ಜೊತೆಗೆ ಹೋಗಿದ್ದೆ. ಆಗ ಅಲ್ಲಿ ಯಾರೋ ನಶೆಯಲ್ಲಿದ್ದ ಹುಡುಗ ನನ್ನ ಸ್ನೇಹಿತೆಯರ ಮೇಲೆ ಬಿದ್ದ. ನಾವೂ ಜೋರಾಗಿ ಕಿರುಚಿದೆವು. ಅಲ್ಲಿದ್ದವರೆಲ್ಲಾ ಓಡಿ ಬಂದರು. ಆದರೆ ಬಿದ್ದ ಹುಡುಗ ಯಾರು..? ಎಲ್ಲಿ ಹೋದ..? ಏನು ಗೊತ್ತಿಲ್ಲ. ಈಗ ಸುದ್ದಿಯಾಗಿರುವಂತೆ ಅವನು ನನಗೆ ಕಪಾಳಕ್ಕೆ ಹೊಡೆದ, ನಾನು ಅವನ ಕಪಾಳಕ್ಕೆ ಹೊಡೆದ ಎಂಬ ಯಾವ ಸನ್ನಿವೇಶವೂ ನಡೆದಿಲ್ಲ ಎಂದಿದ್ದಾರೆ.

ಇನ್ನು ಮದ್ಯಪಾನ ಮಾಡಿ ಹೋಗಿದ್ದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿ, ನಾನು ಬಾಂಬೆಯಲ್ಲಜ ನಡೆಯುವ ಶೂಟಿಂಗ್ ಒಂದರಲ್ಲಿ ಭಾಗಿಯಾಗಬೇಕು. ಅದಕ್ಕೆ ಜೀರೋ ಶುಗರ್ ಡಯೆಟ್ ಮಾಡುತ್ತಾ ಇದ್ದೀನಿ. ನಾನು ಯಾವುದೇ ಕಾರಣಕ್ಕೂ ಮದ್ಯ ಸೇವನೆ ಮಾಡಿಲ್ಲ. ಧೂಮಪಾನ, ಮದ್ಯಪಾನ ಏನನ್ನು ನಾನು ಮಾಡುವುದಿಲ್ಲ. ನಾನು ಮಾಲೆ ಧರಿಸಿದ್ದೇನೆ. ಅದೆಲ್ಲ ಮಾಡಲು ಸಾಧ್ಯವಾ..? ಇನ್ನು ಅಲ್ಲಿ ಇದ್ದದ್ದೆಲ್ಲ ದೇವಸ್ಥಾನಗಳು. ಮದ್ಯಪಾನ ಮಾಡಿ ಅಲ್ಲಿಗೆ ಹೋಗುತ್ತೇವಾ..? ಕಂಬಳ ನೋಡುವುದಕ್ಕೆ ಹೋಗಿದ್ದು ಎಂಜಾಯ್ ಮಾಡುವುದಕ್ಕೆ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!