Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವಜನರು ಅತ್ಯಂತ ಜವಾಬ್ದಾರಿಯುತವಾಗಿ ಭವಿಷ್ಯವನ್ನು ಕಟ್ಟಿಕೊಳ್ಳಬೇಕು : ಶ್ರೀಮತಿ ಚಂದ್ರಕಲಾ ಚಂದ್ರಪ್ಪ

Facebook
Twitter
Telegram
WhatsApp

ಚಿತ್ರದುರ್ಗ, (ಜ.13) :  ದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿರುವ ಎಸ್. ಎಲ್. ವಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನ ಹಾಗೂ ಸ್ವಾಮಿ ವಿವೇಕಾನಂದರ 160 ನೇ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯಾದ ಶ್ರೀಮತಿ ಚಂದ್ರಕಲಾ ಚಂದ್ರಪ್ಪನವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ, “ಯುವಜನರು ಅತ್ಯಂತ ಜವಾಬ್ದಾರಿಯುತವಾಗಿ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಹಾಗೂ ತಂದೆತಾಯಿಗಳು, ಗುರು-ಹಿರಿಯರಿಗೆ ಗೌರವ ನೀಡುವುದು ಅತ್ಯಗತ್ಯ” ಎಂದು ಹೇಳುತ್ತಾ ದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆಯಿಂದ ಹಲವು ಸಾವಿರ ಶಿಕ್ಷಿತ ಯುವಪೀಳಿಗೆಯನ್ನು ಸಮಾಜಕ್ಕೆ ಕಳೆದ 40 ವರ್ಷಗಳಿಂದ ಕೊಡುಗೆ ನೀಡುತ್ತಾ ಬಂದಿದೆ ಎಂದರು.

ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಚಳ್ಳಕೆರೆ ನಗರದ ಶ್ರೀ ರಾಮಕೃಷ್ಣ ಆಶ್ರಮದ ಪರಮಪೂಜ್ಯ ಮಾತಾ ತ್ಯಾಗಮಯಿಯವರು “ವಿದ್ಯಾರ್ಥಿ ದೆಸೆಯಲ್ಲಿ ಮೂರು ಮುಖ್ಯವಾದ ಅಂಶಗಳನ್ನು ಅಳವಡಿಸಿಕೊಳ್ಳಬೇಕು.

ಅವುಗಳೆಂದರೆ ಸ್ಪಷ್ಟ ಗುರಿ, ಮನಸ್ಸೆಂಬ ಕನ್ನಡಿಯನ್ನು ಸ್ವಚ್ಛವಾಗಿರಿಸಿಕೊಳ್ಳುವುದು, ಉತ್ತಮ ಚಿಂತನಾ ಸಾಮರ್ಥ್ಯವನ್ನು ರೂಢಿಸಿಕೊಳ್ಳುವುದು. ಈ ಮೂಲಕ ಸದೃಢ ಸಮಾಜದ ನಿರ್ಮಾಣ ಸುಲಭ.” ಎಂದು ಪ್ರೋತ್ಸಾಹದ ನುಡಿಗಳನ್ನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್‌ ಎಲ್‌ ವಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಬಿ.ಎ.ಕೊಟ್ರೇಶ್‌ರವರು “ಸ್ವಾಮಿ ವಿವೇಕಾನಂದರು ಸ್ವಾವಲಂಬಿ, ಸ್ವಾಭಿಮಾನ, ಸ್ವದೇಶ ಪ್ರೇಮ, ಸ್ವ-ಗೌರವ, ಸ್ವ-ಚಿಂತನೆಯನ್ನು ಪ್ರತೀಕವಾಗಿದ್ದರು.

ಇಂದಿನ ಯುವಪೀಳಿಗೆಗೆ ಸ್ವಾಮಿ ವಿವೇಕಾನಂದರು ತಾವು ಜೀವಿಸಿದ ಅಲ್ಪಕಾಲದಲ್ಲೇ ಹಲವು ಶತಮಾನಗಳ ಕಾಲ ಸ್ಮರಿಸಲು ಸಾಧ್ಯವಾಗುವಂತಹ ಚಿಂತನೆಗಳು, ವಿಚಾರಧಾರೆಗಳನ್ನು ನೀಡಿ ತೆರಳಿದ್ದಾರೆ.”ಎಂದು ನುಡಿದರು.

ಕಾರ್ಯಕ್ರಮದಲ್ಲಿ ಪ್ರಕೃತಿ ಆರ್ಯುವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ನವಾಜ್‌ ಅಹಮದ್‌, ಎಸ್‌̤ಎಲ್‌̤ವಿ ನರ್ಸಿಂಗ್‌ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಮಹಾಂತೇಶ್‌ ಹಾಗೂ ಆದ್ಯ ಕಾಲೇಜ್‌ ಆಫ್‌ ಫಾರ್ಮಸಿಯ ಪ್ರಾಚಾರ್ಯರಾದ ಡಾ. ಫಾಲಾಕ್ಷ ಎಂ.ಎನ್‌ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಹರ್ಷ ಯು ರವರು ನಡೆಸಿದರೆ, ಶ್ರೀಮತಿ ಅಕ್ಷತಾ.ಎನ್.ಎಸ್‌ ಸಭೆಗೆ ವಂದನೆಗಳನ್ನು ಅರ್ಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!