Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 12 ರಂದು ದಾವಣಗೆರೆಯಲ್ಲಿ ಯುವ ಸಮಾವೇಶ : ಮಹೇಶ್ ಸಿ.ನಗರಂಗೆರೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.09): ದಾವಣಗೆರೆಯ ಮೋತಿವೀರಪ್ಪ ಕಾಲೇಜು ಮೈದಾನದಲ್ಲಿ ಜ.12 ರಂದು ಬೆಳಿಗ್ಗೆ 10 ರಿಂದ ಸಂಜೆ ನಾಲ್ಕು ಗಂಟೆವರೆಗೆ ಯುವ ಸಮಾವೇಶ ನಡೆಸಲಾಗುವುದೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಸಂಚಾಲಕ ಮಹೇಶ್ ಸಿ.ನಗರಂಗೆರೆ ತಿಳಿಸಿದರು.

ಪತ್ರಕರ್ತರ ಭವದನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರವರ ಕನಸಿನಂತೆ ಯುವ ಸಮೂಹವನ್ನು ದುಶ್ಚಟದಿಂದ ದೂರವಿರುವಂತೆ ಜಾಗೃತಿಗೊಳಿಸುವುದು ಸಮಾವೇಶದ ಉದ್ದೇಶವಾಗಿದೆ. ತಪ್ಪುದಾರಿಗೆ ಹೋಗದಂತೆ ಎಚ್ಚರ ವಹಿಸಿದಾಗ ಮಾತ್ರ ಸದೃಢ ಸಮಾಜ ಕಟ್ಟಲು ಸಾಧ್ಯ ಎಂದು ಹೇಳಿದರು.

ರಸ್ತೆ ಅಗಲೀಕರಣ ಸಂದರ್ಭಗಳಲ್ಲಿ ಹಳೆ ಮರಗಳನ್ನು ಕಡಿಯುವುದರಿಂದ ಪರಿಸರಕ್ಕೆ ಹಾನಿಯಾಗಲಿದೆ. ಆಗ ನಮ್ಮ ಗಮನಕ್ಕೆ ತಂದರೆ ಜೆ.ಸಿ.ಬಿ.ತೆಗೆದುಕೊಂಡು ಹೋಗಿ ಬುಡ ಸಮೇತ ಕೀಳುವ ಮರಗಳನ್ನು ಗುಂಡಿ ತೆಗೆದು ನೆಟ್ಟು ಸಾರ್ವಜನಿಕರಲ್ಲಿ ಪರಿಸರ ಕಾಳಜಿ ಮೂಡಿಸಲಾಗುವುದೆಂದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣರೆಡ್ಡಿ ಯುವ ಪ್ರಣಾಳಿಕೆ ಬಿಡುಗಡೆಗೊಳಿಸುವರು. ಯುವ ಘಟಕದ ರಘು ಜಾಣಗೆರೆ ಸಮಾವೇಶಕ್ಕೆ ಆಗಮಿಸಲಿದ್ದಾರೆ. ಚಿತ್ರದುರ್ಗ ಜಿಲ್ಲೆಯಿಂದ ನೂರರಿಂದ ಇನ್ನೂರು ಯುವಕರು ಸಮಾವೇಶಕ್ಕೆ ತೆರಳಲಿದ್ದು, ಒಟ್ಟು ಒಂದುವರೆ ಸಾವಿರ ಯುವಕರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.

ಬೇಡರೆಡ್ಡಿಹಳ್ಳಿ ನಾಗಿರೆಡ್ಡಿ, ಸಿದ್ರಾಮಪ್ಪ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!