Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭ್ರಷ್ಟಾಚಾರ ಹೋಗಲಾಡಿಸಲು ಯುವಜನ ಪಕ್ಷ ಅಸ್ತಿತ್ವಕ್ಕೆ : ವಿ.ಎಸ್.ಭೂತರಾಜ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. 17 : ಭ್ರಷ್ಟಾಚಾರವನ್ನು ಹೋಗಲಾಡಿಸುವ ಉದ್ದೇಶದಿಂದ ಯುವಜನ ಪಕ್ಷವನ್ನು ಕಟ್ಟಿದ್ದೇವೆಂದು ಸಂಸ್ಥಾಪಕ ಅಧ್ಯಕ್ಷ ನ್ಯಾಯವಾದಿ ವಿ.ಎಸ್.ಭೂತರಾಜ್ ತಿಳಿಸಿದರು.

 

ಬಿಜೆಪಿ. ಕಚೇರಿ ಹಿಂಭಾಗ ನೂತನವಾಗಿ ಬುಧವಾರ ಯುವಜನ ಪಕ್ಷದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು ಯುವ ಸಮೂಹವನ್ನು ಸೇರಿಸಿಕೊಂಡು ಯುವ ಜನ ಪಕ್ಷವನ್ನು ರಾಜ್ಯಾದ್ಯಂತ ವಿಸ್ತರಿಸುವುದು ನಮ್ಮ ಉದ್ದೇಶ. ಹಣಬಲ, ರಾಜಕೀಯ ಹಿನ್ನೆಲೆಯಿರುವವರು ಮಾತ್ರ ರಾಜಕೀಯಕ್ಕೆ ಬರಬಹುದೆಂಬ ತಪ್ಪು ಕಲ್ಪನೆ ಜನರಲ್ಲಿದೆ. ಯುವ ಜನಾಂಗವನ್ನು ಬಳಸಿಕೊಂಡು ರಾಜಕೀಯದಲ್ಲಿ ಬೆಳೆಯುವವರೆ ಹೆಚ್ಚಾಗಿರುವ ಇಂದಿನ ಕಾಲದಲ್ಲಿ ಯುವ ಜನ ಪಕ್ಷವನ್ನು ವಿಭಿನ್ನವಾಗಿ ಕಟ್ಟಬೇಕೆಂಬ ಆಸೆಯಿಟ್ಟುಕೊಂಡಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಮನವಿ ಮಾಡಿದರು.

 

ಶಿಕ್ಷಣ, ಆರೋಗ್ಯ, ಉದ್ಯೋಗವನ್ನು ರಾಜಕಾರಣಿಗಳು ವ್ಯವಹಾರವನ್ನಾಗಿ ಮಾಡಿಕೊಂಡಿದ್ದಾರೆ. ಶೇ.50 ರಷ್ಟು ಶಿಕ್ಷಣ ಸಂಸ್ಥೆಗಳು ರಾಜಕಾರಣಿಗಳಿಗೆ ಸೇರಿದೆ. ಹೀಗಾದರೆ ಸರ್ಕಾರಿ ಶಾಲೆಗಳು ಉಳಿಯುವುದಾದರೂ ಹೇಗೆ ಎಂದು ಪ್ರಶ್ನಿಸಿದ ಭೂತರಾಜ್ ಕೋವಿಡ್ ಸಂದರ್ಭದಲ್ಲೂ ರಾಜಕಾರಣಿಗಳು ಹಣ ಲೂಟಿ ಮಾಡಿದ್ದಾರೆ. ಚುನಾವಣೆಯಿಂದ ಭ್ರಷ್ಟಾಚಾರ ಆರಂಭವಾಗುತ್ತದೆ. ಸಮಾಜದ ಉಳಿವಿಗೆ ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಯುವ ಜನ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು.
ನ್ಯಾಯವಾದಿ ಅವಿನಾಶ್ ಮಾತನಾಡಿ ಅಸ್ಪøಶ್ಯತೆ, ತಾರತಮ್ಯ, ಜೀತ ಪದ್ದತಿ ಇನ್ನು ಜೀವಂತವಾಗಿರುವ ಈ ಸಮಾಜದಲ್ಲಿ ಬದಲಾವಣೆಯನ್ನು ತರಬೇಕೆಂದು ಹೊರಟಿರುವ ಯುವ ಜನ ಪಕ್ಷ ರಾಜ್ಯಾದ್ಯಂತ ಗಟ್ಟಿಯಾಗಿ ಬೆಳೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತಾಗಲಿ ಎಂದು ಹಾರೈಸಿದರು.

 

ನ್ಯಾಯವಾದಿ ತಿಪ್ಪೇಸ್ವಾಮಿ ಮಾತನಾಡುತ್ತ ಭೂತರಾಜ್ ಯುವ ಜನ ಪಕ್ಷ ಕಟ್ಟಿ ನಿರುದ್ಯೋಗ, ಭ್ರಷ್ಟಾಚಾರನ್ನು ಬೇರು ಸಮೇತ ಕಿತ್ತು ಹಾಕಲು ಹೊರಟಿದ್ದಾರೆ. ಅವರ
ಕನಸು ನನಸಾಗಲಿ. ರಾಜ್ಯಾದ್ಯಂತ ಪಕ್ಷ ಬೆಳೆಯಲಿ ಎಂದು ಶುಭ ಕೋರಿದರು.

ಶಿವಕುಮಾರ್ ಮಾತನಾಡಿ ನನಗೆ ರಾಜಕೀಯದಲ್ಲಿ ಬೆಳೆಯಬೇಕೆಂಬ ಆಸೆಯಿತ್ತು. ಆದರೆ ಈಡೇರಲಿಲ್ಲ. ನನ್ನ ಮಗ ಯುವ ಜನ ಪಕ್ಷ ಕಟ್ಟಿರುವುದು ಅತ್ಯಂತ ಖುಷಿಯಾಗಿದೆ. ಈಗಿನ ಕುಟುಂಬ ರಾಜಕಾರಣದಲ್ಲಿ ಬೇರೆಯವರಿಗೆ ಅವಕಾಶವಿಲ್ಲ. ಇಂತಹ ಸಂದರ್ಭದಲ್ಲಿ ಭೂತರಾಜ್ ಯುವ ಜನಾಂಗವನ್ನು ದೃಷ್ಠಿಯಲ್ಲಿಟ್ಟುಕೊಂಡು ಸ್ಥಾಪಿಸಿರುವ ಯುವ ಜನ ಪಕ್ಷಕ್ಕೆ ಎಲ್ಲರೂ ಕೈಜೋಡಿಸಿ ಎಂದು ವಿನಂತಿಸಿದರು.
ಸರಸ್ವತಿ ಕಾನೂನು ಕಾಲೇಜಿನ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಣ್ಣಪ್ಪ, ಅನಿಲ್ ಜಂಬೆ, ನ್ಯಾಯವಾದಿ ಪ್ರಸನ್ನಕುಮಾರ್ ಇವರುಗಳು ವೇದಿಕೆಯಲ್ಲಿದ್ದರು.
ಅಲೆಮಾರಿ ಜನಾಂಗದ ಅಧ್ಯಕ್ಷ ಎಸ್.ಲಕ್ಷ್ಮಿಕಾಂತ್ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now