ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂ.11 : ನಾಗರೀಕ ಜಗತ್ತಿನಲ್ಲಿ ಒತ್ತಡದಲ್ಲಿರುವ ನಾಗರೀಕ ಸಮೂಹ, ಯುವ ಜನಾಂಗ ಸಾಂಸ್ಕೃತಿಕ, ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ನೆಮ್ಮದಿಯ ಜೀವನ ಕಂಡುಕೊಳ್ಳಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ತಿಳಿಸಿದರು.
ಧವಳಗಿರಿ ಬಡಾವಣೆಯಲ್ಲಿರುವ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ಹನ್ನೊಂದನೆ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.
ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದಲ್ಲಿ ದವಳಗಿರಿ ಬಡಾವಣೆಯ ನಾಗರೀಕರು ಸೇರಿಕೊಂಡು ಹನ್ನೊಂದು ವರ್ಷಗಳಿಂದಲೂ ಇಂತಹ ಸಾಂಸ್ಕøತಿಕ ಕಾರ್ಯಕ್ರಮ
ಆಚರಿಸಿಕೊಂಡು ಬರುತ್ತಿರುವುದನ್ನು ನೋಡಿದರೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ವಯೋಮಾನದವರು ಇಂತಹ ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸಿದರೆ ಮನಸ್ಸು ಹಗುರವಾಗಿ ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.
ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಸಿ.ನಿರಂಜನಮೂರ್ತಿ, ಸಿ.ಜಿ.ಶ್ರೀನಿವಾಸ್, ಎಲ್.ಷಣ್ಮುಖ, ಹೊರಕೆ ರಂಗಪ್ಪ, ಈಶ್ವರಪ್ಪ, ರಾಜಣ್ಣ, ಕೆ.ಪ್ರಾಣೇಶ್, ಹಾಸ್ಯ ಸಾಹಿತಿ ಜಗನ್ನಾಥ್, ಓ.ಬಿ.ಬಸವರಾಜ್ ವೇದಿಕೆಯಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












