Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ : ಭವಿಷ್ಯ ಬದಲಾವಣೆ, ಬೇವು – ಬೆಲ್ಲದ ಮಹತ್ವ ಇಲ್ಲಿದೆ ಮಾಹಿತಿ

Facebook
Twitter
Telegram
WhatsApp

 

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ. ಈ ಯುಗಾದಿ ಕೂಡ ಹೊಸ ಹರುಷವ ತರಲಿ ಎಂದೇ ಎಲ್ಲರೂ ಹಾರೈಸುತ್ತಾರೆ. ಯುಗಾದಿ ಎಂದರೆ ಹಿಂದೂಗಳ ಪಾಲಿನ ಹೊಸ ವರ್ಷವೇ ಸರಿ. ಯುಗ + ಆದಿ = ಯುಗಾದಿ. ಈ ದಿನ ಹಲವು ವಿಶೇಷತೆಗಳು ಇದೆ. ಎಷ್ಟೋ ಜನರ ರಾಶಿ ಫಲವು ಬದಲಾಗುತ್ತದೆ. ಭವಿಷ್ಯವೂ ಬದಲಾವಣೆಯಾಗಲಿದೆ. ಆಕಾಶ ವಸ್ತುಗಳ ಭವಿಷ್ಯದ ಸ್ಥಾನಗಳು, ನಕ್ಷತ್ರದ ಪ್ರಮಾಣಗಳು ಮತ್ತು ನಕ್ಷತ್ರಪುಂಜಗಳ ಪರಾಕಾಷ್ಠೆಯ ದಿನಾಂಕಗಳು ಇರುತ್ತದೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿಯನ್ನು ಹೊಸ ವರ್ಷದ ದಿನವಾಗಿ ಆಚರಿಸಲಾಗುತ್ತದೆ. ಈ ಹಬ್ಬವು ಹೊಸ ಯುಗದ ಆರಂಭವನ್ನು ಸಂಕೇತಿಸುತ್ತದೆ, ಏಕೆಂದರೆ ಬ್ರಹ್ಮಾಂಡದ ಸೃಷ್ಟಿಕರ್ತನಾದ ಬ್ರಹ್ಮನು ಈ ಮಂಗಳಕರ ದಿನದಂದು ಸೃಷ್ಟಿ ಪ್ರಕ್ರಿಯೆಯನ್ನು ಪ್ರಾರಂಭಿಸಿದನು ಎಂಬುದು ಈ ಹಬ್ಬಕ್ಕೆ ಸಂಬಂಧಿಸಿದ ಪೌರಾಣಿಕ ನಂಬಿಕೆಯಾಗಿದೆ.

ಯುಗಾದಿ ಹಬ್ಬ ಎಂದ ಕೂಡಲೇ ಆ ದಿನ ಬೇವು-ಬೆಲ್ಲ ಎರಡನ್ನೂ ಸೇವಿಸುತ್ತೇವೆ. ವಿಶೇಷ ಅರ್ಥವನ್ನೊಳಗೊಂಡಿರುವ ಬೇವು-ಬೆಲ್ಲವನ್ನು ಹಿಂದೂಗಳು ತಪ್ಪದೇ ಯುಗಾದಿ ಹಬ್ಬದಂದು ಸವಿಯುತ್ತಾರೆ. ಕರ್ನಾಟಕದಲ್ಲಿ ಬೇವು-ಬೆಲ್ಲವನ್ನು ತಿನ್ನುವುದು ಸಂಪ್ರದಾಯ. ಕಹಿಯಾದ ಬೇವು ಜೀವನದಲ್ಲಿ ಬರುವ ಕಷ್ಟ, ದುಃಖಗಳು, ತೊಡಕುಗಳನ್ನು ಪ್ರತಿಬಿಂಬಿಸಿದರೆ, ಸಿಹಿಯಾದ ಬೆಲ್ಲ ಜೀವನದಲ್ಲಿ ಬರುವ ಸಂತೋಷ ಸಂಭ್ರಮಗಳ ಸಂಕೇತವಾಗಿದೆ. ಜೀವನದಲ್ಲಿ ಸುಖ-ದುಃಖ ಇರುತ್ತದೆ. ಎರಡನ್ನೂ ಅನುಭವಿಸಬೇಕೆಂಬ ಅರ್ಥವನ್ನು ನೀಡುವ ಬೇವು-ಬೆಲ್ಲವನ್ನು ವರ್ಷದ ಆರಂಭದ ದಿನ ತಿನ್ನಬೇಕು ಎಂದು ನಮ್ಮ ಹಿರಿಯರು ಅಂದಿನಿಂದ ಪದ್ಧತಿಯಾಗಿ ಮಾಡಿಕೊಂಡು ಬಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!