Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಮಕೂರಿನಲ್ಲಿ ಸಿನಿಮಾ ಪ್ರಮೋಷನ್ ವೇಳೆ ಮಹಿಳೆಗೆ ಗಾಯ : ಕ್ಷಮೆ ಕೇಳಿದ ಯುವ ರಾಜ್‍ಕುಮಾರ್

---Advertisement---

ಬೆಂಗಳೂರು: ಯುವ ರಾಜ್‍ಕುಮಾರ್ ಬಹಳ ನಿರೀಕ್ಷೆ ಇಟ್ಟುಕೊಂಡಿರುವಂತ ಸಿನಿಮಾ ಎಕ್ಕಾ ರಿಲೀಸ್ ಗೆ ರೆಡಿಯಾಗಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಸಿನಿಮಾ ಪ್ರಚಾರಕ್ಕಾಗಿ ತಂಡ ತುಮಕೂರಿಗೆ ಹೋಗಿತ್ತು. ಈ ವೇಳೆ ಅವಗಢ ಒಂದು ನಡೆದಿತ್ತು. ಮಹಿಳೆಗೆ ಪೆಟ್ಟಾಗಿತ್ತು‌. ಅದಕ್ಕೆ ಸಂಬಂಧಿಸಿದಂತೆ ಇದೀಗ ಯುವ ರಾಜ್‍ಕುಮಾರ್ ಕ್ಷಮೆ ಕೇಳಿದ್ದಾರೆ.

ಇಂದು ಎಕ್ಕಾ ಸಿನಿಮಾ ಕಾರ್ಯಕ್ರಮದ ಸಮಯದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಸಿನಿಮಾ ಪ್ರಚಾರದ ವೇಳೆ ಎಕ್ಕಾ ಟೀಂ ಮಠಕ್ಕೆ ಭೇಟಿ ನೀಡಿತ್ತು. ಜನಸಂದಣಿ ಹೆಚ್ಚಾಗಿದ್ದ ಕಾರಣ ತಳ್ಳಾಟ ನೂಕಾಟವಾಗಿದೆ. ಈ ಘಟನೆಯಲ್ಲಿ ಮಹಿಳೆಯ ಕಾಲಿಗೆ ಪೆಟ್ಟು ಬಿದ್ದ ವಿಚಾರ ನನಗೆ ಗೊತ್ತಿರಲಿಲ್ಲ. ಬೆಂಗಳೂರಿಗೆ ವಾಪಾಸ್ ಆದಾಗ ನೋಡಿದೆ. ಆ ಬಳಿಕ ನಮ್ಮ ಅಭಿಮಾನಿ ಬಳಗದಿಂದ ಮಹಿಳೆಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಮಾಡಿಕೊಡಲಾಗಿದೆ. ಬೌನ್ಸರ್ ತಳ್ಳಿದ್ದಾರೆ ಎಂಬ ವಿಚಾರ ಕೇಳಿದೆವು. ಅವರ ಪರವಾಗಿ ನಾವೂ ಕ್ಷಮೆ ಕೇಳುತ್ತೇವೆ ಎಂದಿದ್ದಾರೆ.

ಎಕ್ಕಾ ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗಷ್ಟೇ ಸಿನಿಮಾ ತಂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿತ್ತು. ಈ ವೇಳೆ ಬೌನ್ಸರ್ ಇದ್ದ ಕಾರು ಮಹಿಳೆಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಮಹಿಳೆ ಕಾಲಿಗೆ ಗಾಯವಾಗಿತ್ತು. ಆದರೆ ಸಿನಿಮಾ ತಂಡ ನೋಡದೆ ಹೋಗಿ ಬಿಟ್ಟಿತ್ತು ಎಂಬ ಆರೋಪವಿತ್ತು. ಅದರ ಬಗ್ಗೆ ತಮ್ಮ ಸಿನಿಮಾ ಪ್ರೆಸ್ ಮೀಟ್ ನಲ್ಲಿಯೇ ಕ್ಲಾರಿಟಿಯೊಂದನ್ನ ಯುವ ರಾಜ್‍ಕುಮಾರ್ ನೀಡಿದ್ದಾರೆ. ಸದ್ಯಕ್ಜೆ ಆ ಮಹಿಳೆ ಆರೋಗ್ಯ ಸುಧಾರಿಸಿದೆ. ಸಿನಿಮಾ ತಂಡವೇ ಚಿಕಿತ್ಸಾ ವೆಚ್ಚ ನೋಡಿಕೊಂಡಿದೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...