Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕುಮಾರಸ್ವಾಮಿಯನ್ನ ಕರಿಯ ಎಂದಿದ್ದಕ್ಕೆ ಕ್ಷಮೆ ಕೇಳಿದ ಜಮೀರ್..!

---Advertisement---

ಮೈಸೂರು: ಚನ್ನಪಟ್ಟಣ ಉಪಚುನಾವಣೆಯ ರಂಗು ಜೋರಾಗಿದೆ. ಗೆಲುವಿನ ಗದ್ದುಗೆಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಯುದ್ಧವನ್ನೇ ನಡೆಸುತ್ತಿವೆ. ಇದರ ನಡುವೆ ಜಮೀರ್ ಅಹ್ಮದ್ ಮಾತಿನ ಬರದಲ್ಲಿ ನಾಲಿಗೆ ಹರಿಬಿಟ್ಟಿದ್ದರು. ಕುಮಾರಸ್ವಾಮಿ ಅವರನ್ನು ಕರಿಯ ಎಂದು ಹೇಳಿದ್ದರು. ಇದೀಗ ಆ ಮಾತಿಗೆ ಕ್ಷಮೆ ಕೋರಿದ್ದಾರೆ.

ಭಾನುವಾರ ಚನ್ನಪಟ್ಟಣದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿರುವಾಗ ಜಮೀರ್ ಅಹ್ಮದ್ ನಾಲಿಗೆ ಹರಿಬಿಟ್ಟಿದ್ದರು. ಬಿಜೆಪಿಯವರಿಗಿಂತ ಕರಿಯ ಕುಮಾರಸ್ವಾಮಿ ಹೆಚ್ಚು ಡೇಂಜರ್ ಎಂದು ಉರ್ದುವಿನಲ್ಲಿ ಹೇಳಿದ್ದರು. ಈ ಹೇಳಿಕೆ ವಿರೋಧ ಪಕ್ಷಗಳಿಗೆ ಆಹಾರವಾಗಿತ್ತು. ಆಡಳಿತ ಪಕ್ಷವನ್ನು ಈ ಮಾತಿನಿಂದಾನೇ ಮಣಿಸುವ ಪ್ರಯತ್ನ ನಡೆಸಿದರು. ಕಾಂಗ್ತೆಸ್ ನಾಯಕರಲ್ಲಿಯೇ ಈ ಮಾತಿಗೆ ಆಕ್ಷೇಪ ವ್ಯಕ್ತವಾಗಿತ್ತು. ಜಮೀರ್ ಮಾತಿನಿಂದ ಕಾಂಗ್ರೆಸ್ ಕೂಡ ಮುಜುಗರಕ್ಕೊಳಗಾಯಿತು. ಈ ಮಾತು ಚುನಾವಣೆಯ ಮೇಲೆ ಪರಿಣಾಮ ಬೀರಬಾರದೆಂದು ಈಗ ಸ್ಪಷ್ಟನೆ ಸಮೇತ ಕ್ಷಮೆ ಕೇಳಿದ್ದಾರೆ. ತಾವ್ಯಾಕೆ ಕುಮಾರಸ್ವಾಮಿ ಅವರನ್ನು ಕರಿಯ ಎಂದಿದ್ದು ಎಂಬುದನ್ನು ವಿವರಿಸಿದ್ದಾರೆ.

‘ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ನಾನು ಹೇಳಿದ ಉದ್ದೇಶವೆ ಬೇರೆ. ಈ ಹಿಂದೆ ನಾನು ಅವರು ಜೊತೆಯಲ್ಲಿದ್ದಾಗ ನನ್ನನ್ನು ಅವರು ಕರೆಯುತ್ತಾ ಇದ್ದದ್ದು ಕುಳ್ಳ ಎಂದು. ನಾನು ಅವರನ್ನು ಕರೆಯುತ್ತಾ ಇದ್ದದ್ದು ಕರಿಯಣ್ಣ ಎಂದು. ಪ್ರೀತಿಯಿಂದ ಅವರು ಕುಳ್ಳ ಎಂದಾಗ ನಾನು ಅಷ್ಟೇ ಪ್ರೀತಿಯಿಂದ ಕರಿಯಣ್ಣ ಎನ್ನುತ್ತಿದ್ದೆ. ಅದನ್ನಷ್ಟೇ ಈಗಲೂ ಹೇಳಿರುವುದು. ಅವರ ಮೇಲೆ ನನಗೂ ಗೌರವವಿದೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದು ತಾವೂ ಆಡಿದ ಮಾತಿಗೆ ಕ್ಷಮೆ ಕೇಳಿದ್ದಾರೆ. ಅದರಲ್ಲೂ ಜೆಡಿಎಸ್ ಕಾರ್ಯಕರ್ತರಿಗೆ ಕ್ಷಮೆಯಾಚಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment