Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ : ಜನರಲ್ಲಿ ಆತಂಕ..!

Facebook
Twitter
Telegram
WhatsApp

ಮಳೆಗಾಲ ಶುರುವಾಯ್ತು ಅಂದ್ರೆ ಸೊಳ್ಳೆಗಳ ಆತಂಕವೇ ಜಾಸ್ತಿ. ಮಲೇರಿಯಾ, ಡೆಂಗ್ಯೂ ಭಯವೇ ಜನರಲ್ಲಿ ಹೆಚ್ಚಾಗಿದೆ. ಅದಾಗಲೇ ಎಷ್ಟೋ ಜನಕ್ಕೆ ಡೆಂಗ್ಯೂ ಬಂದು ಚೇತರಿಸಿಕೊಂಡಿದ್ದಾರೆ. ಇದೀಗ ಝೀಕಾ ವೈರಸ್ ಕಾಟ ಶುರುವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಕಾಣಿಸಿಕೊಂಡಿದ್ದು, ರಾಜ್ಯದ ಜನಕ್ಕೆ ಆತಂಕ ತಂದೊಡ್ಡಿದೆ.

 

ಶಿಡ್ಲಘಟ್ಟ ತಾಲೂಕಿನ ತಲಕಾಯಬೆಟ್ಟದ ಗ್ರಾಮದ ಬಳಿ ವೈರಸ್ ಕಾಣಿಸಿಕೊಂಡಿದೆ. ಕೀಟಶಾಸ್ತ್ರ ವೈದ್ಯರು ಪರೀಕ್ಷಿಸಿದ ಸೊಳ್ಳೆಯಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ. ಈ ಸಂಬಂಧ ಡಿಎಚ್ಒ ಎಸ್ ಎಸ್ ಮಹೇಶ್ ಮಾತನಾಡಿ, ಪ್ರಕರಣ ಸಂಬಂಧ ಸುತ್ತಮುತ್ತಲಿರುವ ತಲಕಾಯ ಬೆಟ್ಟ, ಬಚ್ಚನಹಳ್ಳಿ, ವೆಂಕಾಟಪುರ , ದಿಬ್ಬೂರಳ್ಳಿಯಲ್ಲಿರುವ ಗರ್ಭಿಣಿಯರಿಗೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಿದ್ದೇವೆ. ಗ್ರಾಮದ ಸುತ್ತಮುತ್ತ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಎಚ್ಚರದಿಂದ ಇರಲು ಸೂಚಿಸಿದ್ದೇವೆ. ರಾಜ್ಯಾದ್ಯಂತ ಸುಮಾರು 100 ಸ್ಯಾಂಪಲ್ ಗಳನ್ನು ಸಂಗ್ರಹಿಸಲಾಗಿದೆ. ಅದರಲ್ಲಿ ಆರು ಚಿಕ್ಕಬಳ್ಳಾಪುರದಲ್ಲಿ ಸಂಗ್ರಹ ಮಾಡಲಾಗಿದೆ. ಅದರಲ್ಲಿ ಆರು ನೆಗೆಟಿವ್ ಎಂದು ಬಂದಿದೆ.

ಈಡಿಸ್ ಸೊಳ್ಳೆ ಕಡಿತದಿಂದ ಝಿಕಾ ವೈರಸ್ ಉಂಟಾಗುತ್ತದೆ. ಜ್ವರ, ಕೆಮ್ಮು ಚರ್ಮದ ಮೇಲೆ ದದ್ದುಗಳು, ಮಾಂಸ ಖಂಡಗಳ ಸೆಳೆತ ಮೈಕೈ ನೋವು ಝಿಕಾದ ಲಕ್ಷಣಗಳಾಗಿದೆ. ಝಿಕಾ ವೈರಸ್ ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಗಾಗುವಂತೆ ವೈದ್ಯರು ಸಲಹೆ ನೀಡಿದ್ದಾರೆ. 1947ರಲ್ಲಿ ಉಗಾಂಡದಲ್ಲಿ ಮೊದಲ ಬಾರಿಗೆ ಝಿಕಾ ವೈರಸ್ ಪತ್ತೆಯಾಗಿತ್ತು. ಕಳೆದ ಡಿಸೆಂಬರ್​ನಲ್ಲಿ ರಾಜ್ಯದ ರಾಯಚೂರಿನ ಐದು ವರ್ಷದ ಬಾಲಕಿಗೆ ಝಿಕಾ ವೈರಸ್ ಇರೋದು ದಾಖಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

ಡಾನಾ ಚಂಡಮಾರುತ ಎಫೆಕ್ಟ್ : ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

ಎಲ್ಲೆಡೆ ಬೆಂಬಿಡದೆ ಮಳೆರಾಯ ಸುರಿಯುತ್ತಿದ್ದಾನೆ. ಕಳೆದ ಕೆಲವು ದಿನಗಳಿಂದ ವಿಶ್ರಾಂತಿಯನ್ನೇ ನೀಡುತ್ತಿಲ್ಲ. ಇದರಿಂದ ಜನರು ಕೂಡ ರೋಸೆದ್ದು ಹೋಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಹಾಗೂ ಒಡಿಶಾದಲ್ಲಿ ಶುರಿವಾಗಿರುವ ಚಂಡಮಾರುತದ ಪ್ರಭಾವವಾಗಿದೆ. ಚಂಡಮಾರುತ ತಗ್ಗುವ ತನಕವೂ ಈ

error: Content is protected !!